ಅಡುಗೆಯಲ್ಲಿ ಹುಳ ಪ್ರತ್ಯಕ್ಷ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

ಹಾಸನ: ಗುಣಮಟ್ಟದ ಆಹಾರ ನೀಡುತ್ತಿಲ್ಲ ಜೊತೆಗೆ ಮೂಲ ಸೌಕರ್ಯಗಳ ಕೊರತೆಯಿಂದ ಭಾರಿ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ನಗರದ ಆಕಾಶವಾಣಿ ಹಿಂಭಾಗದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಶನಿವಾರ ಪ್ರತಿಭಟನೆ ನಡೆಸಿದರು.
ಹಾಸ್ಟೆಲ್ ನಲ್ಲಿ ನೀಡುವ ತಿಂಡಿ, ಊಟ, ಶೌಚಾಲಯ, ಕುಡಿಯುವ ನೀರು ಸಮಸ್ಯೆ ಹೆಚ್ಚಾಗಿದೆ.
ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಹಾಗೂ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬೇಕು. ಇಲ್ಲವಾದರೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಹಾಸ್ಟೆಲ್ ವಾರ್ಡನ್ ದೇವಯ್ಯ ಮತ್ತು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸತೀಶ್ ಅವರು ನಮಗೆ ಸ್ಪಂದಿಸುತ್ತಿಲ್ಲ.
ಹಾಸ್ಟೇಲ್ ನಲ್ಲಿ ಬೆಳಗಿನ ತಿಂಡಿ, ಮಧ್ಯಾಹ್ನದ ಊಟ ಹಾಗೂ ಸಂಜೆ ಊಟ ಸೇವನೆ ಮಾಡಲು ಹೋದರೆ ಪ್ರತಿಯೊಂದರಲ್ಲೂ ಹುಳ ಸಿಗುತ್ತದೆ. ಈ ಬಗ್ಗೆ ದೂರು ಹೇಳಲು ಹೋದರ ಆಧಿಕಾರಿಗಳು ಸರಿ ಮಾಡುವುದಾಗಿ ಹೇಳಿ ಭರವಸೆ ನೀಡುತ್ತಾರೆ. ಆದರ ಸರಿಪಡಿಸುವುದಿಲ್ಲ ಎಂದು ಆರೋಪಿಸಿದರು. 

ಸಮಸ್ಯೆ ಪರಿಹಾರಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಬೆಂಬಲ ಕೋರಲಾಗಿದ್ದು, ಈ ಸಮಸ್ಯೆ ಏನಾದರೂ ಬಗೆಹರಿಸದಿದ್ದರೇ ಮುಂದಿನ ದಿನಗಳಲ್ಲಿ ರಾಜ್ಯಾಧ್ಯಂತ ಉಗ್ರವಾದ ಹೋರಾಟ ಮಾಡಲಾಗುವುದು. ಸಮಾಜ ಕಲ್ಯಾಣ ಇಲಾಖೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳಾದ ಪ್ರವೀಣ್, ಪ್ರತಾಪ್, ಸುಮನ್ ಶಿವಕುಮಾರ್, ಶರತ್, ಆಕಾಶ್, ಪ್ರೀತಮ್, ಚಿದಂಬರ್ ಉಪಸ್ಥಿತರಿದ್ದರು.

Post a Comment

0 Comments