ಪ್ರೋಬೆಷನರಿ ಐಪಿಎಸ್‌‍ ಅಧಿಕಾರಿಯ ದುರಂತ ಅಂತ್ಯ

ಪ್ರೋಬೆಷನರಿ ಐಪಿಎಸ್‌‍ ಅಧಿಕಾರಿಯ ದುರಂತ ಅಂತ್ಯ



ಹಾಸನ: ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್‌‍ ಜೀಪ್‌ ಪಕ್ಕದ ಮನೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪ್ರೋಬೆಷನರಿ ಐಪಿಎಸ್‌‍ ಅಧಿಕಾರಿ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

ಮಧ್ಯಪ್ರದೇಶದ ಸಿಂಗ್ರುಲಿ ಜಿಲ್ಲೆಯ ದೋಸಾರ್‌ ಗ್ರಾಮದ ಹರ್ಷ ಬರ್ಧನ್‌ (26) ಮೃತ ದುರ್ದೈವಿ. ಜೀಪ್‌ ಚಾಲಕ, ಹಾಸನದ ಡಿಎಆರ್‌ ಕಾನ್ಸಟೇಬಲ್‌ ಮಂಜೇಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೈಸೂರಿನಿಂದ ಹಾಸನಕ್ಕೆ ಬರುತ್ತಿದ್ದ ಮಹೇಂದ್ರ ಬುಲೆರೋ ಜೀಪ್‌ ಟೈಯರ್‌ ಸ್ಫೋಟದಿಂದ ನಿಯಂತ್ರಣ ತಪ್ಪಿ ರಸ್ತೆಯ ಎಡಭಾಗದ ತಡೆಕಂಬಗಳಿಗೆ ಡಿಕ್ಕಿ ಹೊಡೆದು ನಂತರ ತೆಂಗಿನ ಮರಕ್ಕೆ ಡಿಕ್ಕಿಯಾಗಿ ಪಕ್ಕದ ಮನೆಗೆ ತಾಗಿ ನಿಂತಿದೆ. ಅಪಘಾತ ಸಂಭವಿಸುತ್ತಿದ್ದಂತೆ ಆಂಬ್ಯುಲೆನ್‌್ಸ ಮೂಲಕ ಹಾಸನದ ಆಸ್ಪತ್ರೆಗೆ ಕರೆತಂದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು. ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನಲೆಯಲ್ಲಿ ಅವರನ್ನು ಝಿರೋ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ಕರೆದೊಯ್ಯುವ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಯಿತಾದರೂ ಪ್ರಯತ್ನ ಈಡೇರಲಿಲ್ಲ. ಐದು ಗಂಟೆಗಳ ಜೀವನರಣ ಹೋರಾಟ ನಡೆಸಿದ ಹರ್ಷ ಬರ್ಧನ್‌ ಅವರು ರಾತ್ರಿ 9.30ರ ವೇಳೆಗೆ ಕೊನೆಯುಸಿರೆಳೆದರು. ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್‌‍ ವರಿಷ್ಟಾಧಿಕಾರಿ ಮೊಹಮದ್‌ ಸುಜೀತಾ ಅವರು ಸಹ ಪ್ರೋಬೆಷನರಿ ಅಧಿಕಾರಿ ಉಳಿಸಿಕೊಳ್ಳಲು ಮಾಡಿದ ಪ್ರಯತ್ನ ವ್ಯರ್ಥವಾಯಿತು.

Post a Comment

0 Comments