ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಕಾನೂನಿಗೆ ತಲೆ ಬಾಗೋಣ


ಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಅತ್ಯಾಚಾರ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿರುವ ಬಗ್ಗೆ ಜೆಡಿಎಸ್ ಶಾಸಕ ಸಿ.ಎನ್.ಬಾಲಕೃಷ್ಣ ಪ್ರತಿಕ್ರಿಯಿಸಿದ್ದಾರೆ. 

ಈ ತೀರ್ಪಿನ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು,  "ನ್ಯಾಯಾಂಗವು ತೀರ್ಪು ನೀಡಿದಾಗ ಅದನ್ನು ಪ್ರಶ್ನಿಸುವ ಅಧಿಕಾರ ನಮಗಿಲ್ಲ. ಕಾನೂನಿಗೆ ಎಲ್ಲರೂ ಗೌರವ ಕೊಡಬೇಕು," ಎಂದರು.

 "ಜನಪ್ರತಿನಿಧಿಗಳ ಕೋರ್ಟ್ ತೀರ್ಪು ನೀಡಿದೆ. ಮುಂದೆ ಏನಾಗುತ್ತದೆ ಎಂಬುದನ್ನು ನೋಡೋಣ. ಮೇಲ್ಮನವಿ ಸಲ್ಲಿಸಲು ಅವಕಾಶವಿದೆ, ಮತ್ತು ಕುಟುಂಬದಲ್ಲಿ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆಗಳು ನಡೆಯುತ್ತಿವೆ," ಎಂದು ತಿಳಿಸಿದರು.

"ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕು. ಮೇಲಿನ ಕೋರ್ಟ್‌ಗೆ ಹೋಗಲು ಅವಕಾಶವಿದೆ" ಎಂದರು.

ಈ ಪ್ರಕರಣವು ಹಾಸನ ಜಿಲ್ಲೆಯ ಗನ್ನಿಕಡ ಫಾರ್ಮ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ 48 ವರ್ಷದ ಮಹಿಳೆಯ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದ್ದು, ಆಗಸ್ಟ್ 2, 2025ರಂದು ಬೆಂಗಳೂರಿನ ವಿಶೇಷ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ಅವರನ್ನು ದೋಷಿಯೆಂದು ಘೋಷಿಸಿ, ಜೀವಾವಧಿ ಶಿಕ್ಷೆಯ ಜೊತೆಗೆ 11 ಲಕ್ಷ ರೂ. ದಂಡ ವಿಧಿಸಿತ್ತು.

Post a Comment

0 Comments